×
Ad

ಅನ್ನದಾತರ ಸಂಕಷ್ಟಕ್ಕೆ ಬಿಜೆಪಿ ಸದಾ ಸ್ಪಂದನೆ : ವಿಜಯೇಂದ್ರ

Update: 2025-09-29 12:09 IST

ಬೀದರ್ : ಬಿಜೆಪಿ, ಅನ್ನದಾತರ ಸಂಕಷ್ಟಗಳಿಗೆ ಸದಾ ಸ್ಪಂದಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಭರವಸೆ ನೀಡಿದ್ದಾರೆ.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಿ.ಖಾಶೆಂಪುರ ಗ್ರಾಮದ ರೈತ ಮಹಿಳೆ ಗಂಗಮ್ಮ ಅವರ ಪತಿ ಶಂಕರಾವ ಮಚ್ಚಕುರಿ ಅವರು ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಬಿ.ವೈ.ವಿಜಯೇಂದ್ರ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮೃತರ ಮನೆಗೆ ಇಂದು ಭೇಟಿ ನೀಡಿದ್ದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಆರ್ಥಿಕ ನೆರವು ನೀಡಿ, ಧೈರ್ಯ ತುಂಬಿದರು.

ಮಾಜಿ ಸಚಿವ ಮತ್ತು ಶಾಸಕ ಪ್ರಭು ಚೌಹಾಣ್, ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಶರಣು ಸಲಗಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News