×
Ad

Chamarajanagar | ನಂಜೇದೇವನಪುರ ಬಳಿ ಒಂದೇ ಕಡೆ 5 ಹುಲಿಗಳ ಬಿಡಾರ: ನಾಳೆ (ಡಿ. 23) ಸಂಜೆ ತನಕ ನಿಷೇಧಾಜ್ಞೆ ಜಾರಿ

Update: 2025-12-22 19:22 IST

ಚಾಮರಾಜನಗರ : ತಾಲೂಕಿನ ಹರವೆ ಹೋಬಳಿಯ ನಂಜೆದೇವಪುರ ಗ್ರಾಮದ ಬಳಿ 5 ಹುಲಿಗಳು ಒಂದೇ ಕಡೆ ಇರುವ ಬಗ್ಗೆ ದೃಢಪಟ್ಟಿದ್ದು, ಹುಲಿಗಳ ಸೆರೆಹಿಡಿಯುವ ಕಾರ್ಯಾಚರಣೆ ಹಿನ್ನೆಲೆ ನಂಜೆದೇವಪುರ ಸೇರಿ ಮೂರು ಗ್ರಾಮಗಳಿಗೆ ನಾಳೆ (ಡಿ. 23) ಸಂಜೆ 6 ಗಂಟೆಯ ತನಕ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು ನಾಗರಿಕರು ಮನೆಯಲ್ಲೇ ಇರುವಂತೆ ತಹಶೀಲ್ದಾರ್ ಗಿರಿಜಾ ಆದೇಶಿಸಿದ್ದಾರೆ.

ಕಾಡಿನಲ್ಲಿರಬೇಕಿದ್ದ ಹುಲಿಗಳು ನಾಡಿಗೆ ನುಗ್ಗಿವೆ. ಚಾಮರಾಜನಗರ ತಾಲೂಕಿನ ನಂಜೆದೇವಪುರ ಗ್ರಾಮದ ಬಳಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿದ್ದು, ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಂಜೆದೇವಪುರ ಸೇರಿ ಮೂರು ಗ್ರಾಮಗಳಲ್ಲಿ ಇಂದಿನಿಂದ ನಾಳೆ ಸಂಜೆ 6ರವರೆಗೂ 144 ಸೆಕ್ಷನ್ ಜಾರಿ ಮಾಡಿ ಚಾಮರಾಜನಗರ ತಹಶೀಲ್ದಾರ್ ಗಿರಿಜಾ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿ:

ಈಗಾಗಲೇ 5 ಹುಲಿಗಳಿರುವ ಜಾಗದ ಲೊಕೇಷನ್ ಅನ್ನು ಅರಣ್ಯ ಸಿಬ್ಬಂದಿ ಟ್ರ್ಯಾಕ್ ಮಾಡಿದ್ದಾರೆ. ಆದರೆ ಚಾಮರಾಜನಗರ ಜಿಲ್ಲೆಯಲ್ಲಿ ಇರುವುದು ಕೇವಲ ಇಬ್ಬರೇ ಪಶು ವೈದ್ಯರು ಮಾತ್ರ. ಹೀಗಾಗಿ ಹುಲಿಗಳನ್ನು ಸೆರೆ ಹಿಡಿಯಲು ಕಷ್ಟಸಾಧ್ಯ ಎನ್ನುತ್ತಿದ್ದಾರೆ ಅರಣ್ಯ ಸಿಬ್ಬಂದಿ. ಸದ್ಯ ಹುಲಿಗಳ ಸೆರೆ ಕಾರ್ಯಾಚರಣೆ ಹಿನ್ನೆಲೆ ನಂಜೆದೇವನಪುರ, ವೀರನಪುರ, ಉಡಿಗಾಲ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆ ಮೂಲಕ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಯಾರೂ ಗುಂಪು ಸೇರಬಾರದು, ಮನೆಯಿಂದ ಹೊರಬರದಂತೆ ತಿಳಿಸಲಾಗಿದ್ದು, ಮೂರು ಗ್ರಾಮಗಳ ಜನರು ಸಹಕರಿಸುವಂತೆ ತಹಶೀಲ್ದಾರ್ ಗಿರಿಜಾ ಮನವಿ ಮಾಡಿದ್ದಾರೆ.

ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ ಸ್ಥಳದಲ್ಲೇ ಬೀಡು ಬಿಟ್ಟಿದ್ದು, ಹೆಚ್ಚಿನ ಆನೆ ಹಾಗೂ ನುರಿತ ಪಶು ವೈದ್ಯರನ್ನು ಕಳುಹಿಸುವ ಆಶ್ವಾಸನೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. 

ಕೂಂಬಿಂಗ್‍ಗೆ ಚಾಲನೆ : ಇನ್ನು ದುಬಾರೆ ಆನೆ ಶಿಬಿರದಿಂದ ಈಗಾಗಲೇ ಈಶ್ವರ ಹಾಗೂ ಲಕ್ಷ್ಮಣ ಆನೆಗಳು ಸ್ಥಳಕ್ಕೆ ಆಗಮಿಸಿದ್ದು, ಕೂಂಬಿಂಗ್ ಕಾರ್ಯಚರಣೆಗೆ ಚಾಲನೆ ನೀಡಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News