×
Ad

ಹನೂರು | ಬಟ್ಟೆ ತೊಳೆಯಲು ತೆರಳಿದ್ದ ತಾಯಿ, ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಮೃತ್ಯು

Update: 2024-04-05 18:12 IST

ಹನೂರು : ಬಟ್ಟೆ ತೊಳೆಯಲು ತೆರಳಿದ್ದ ತಾಯಿ, ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹನೂರು ತಾಲೂಕಿನ ಗೋಪಿನಾಥಂ ಜಲಾಶಯದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಗೋಪಿನಾಥಂ ಸಮೀಪದ ಪುದೂರು ಗ್ರಾಮದ ನಿವಾಸಿಗಳಾದ ಮೀನಾ (34), ಪವಿತ್ರಾ (14) ಹಾಗು ಕೀರ್ತಿ (11) ಎಂದು ಗುರುತಿಸಲಾಗಿದೆ.

ಘಟನೆ ವಿವರ : ತಾಯಿ ಮೀನಾ ತಮ್ಮ ಮಕ್ಕಳೊಂದಿಗೆ ಶುಕ್ರವಾರ ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋಗಿದ್ದರು. ಬಟ್ಟೆ ತೊಳೆದ ನಂತರ ಬಟ್ಟೆಯನ್ನು ಹಿಂಡಲು ಹೋದ ಮೀನಾ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಇಬ್ಬರು ಹೆಣ್ಣು ಮಕ್ಕಳು ತಾಯಿಯನ್ನು ರಕ್ಷಿಸಲು ಹೋಗಿ ನೀರಿನಲ್ಲಿ ಮುಳುಗಿದ್ದಾರೆ ಎಂದು ಹೇಳಲಾಗಿದೆ.ಸ್ಥಳದಲ್ಲಿದ್ದ ಮಗ ಸುರೇಂದ್ರ ತಂದೆಗೆ ವಿಷಯ ತಿಳಿಸಿ ಕರೆದುಕೊಂಡು ಬರುವಷ್ಟರಲ್ಲಿ ಮೂವರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ಮೃತದೇಹ ಹೊರತೆಗೆಯಲಾಗಿದ್ದು, ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News