×
Ad

ಚಾಮರಾಜನಗರ: ಕಾಡ್ಗಿಚ್ಚಿಗೆ 60 ಎಕರೆಯಷ್ಟು ಕಾಡಿನ ನೆಲ ಹಾಸು ನಾಶ

Update: 2024-03-06 09:26 IST

ಚಾಮರಾಜನಗರ: ಕಾಡ್ಗಿಚ್ಚಿಗೆ 60 ಎಕರೆಯಷ್ಟು ಕಾಡಿನ ನೆಲ ಹಾಸು ಬೆಂಕಿಗಾಹುತಿ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಪುಣಜನೂರು ವಲಯದ ಕೊಡಾರೆ ಪ್ರದೇಶದಲ್ಲಿ ಸಂಭವಿಸಿರುವುದು ವರದಿಯಾಗಿದೆ.

ಚಾಮರಾಜನಗರ ತಾಲೂಕಿನ ಪುಣಜನೂರು ಬಲಿಯ ಕೊಡಾರೆ ಪ್ರದೇಶದ ಕಾಡಿನಲ್ಲಿ ಸೋಮವಾರ ಮಧ್ಯಾಹ್ನ ಕಾಣಿಸಿಕೊಂಡ ಬೆಂಕಿಯನ್ನು ಸಂಜೆಯ ತನಕ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ರಾತ್ರಿಯ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ ಎಂದು ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಕಂಟ್ರಾಕ್ಟರ್ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News