ಚಾಮರಾಜನಗರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

Update: 2024-04-18 07:18 GMT

ಚಾಮರಾಜನಗರ : ಕಳೆದ ಹಲವು ದಿನಗಳಿಂದ ಪ್ರಾಣಿಗಳ ಮೇಲೆ ದಾಳಿ ನಡೆಸಿ ಗ್ರಾಮಸ್ಥರಿಗೆ ಭಯವನ್ನುಂಟು ಮಾಡಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಗುರುವಾರದಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೊಕ್ಕಹನಳ್ಳಿ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದ ಸುತ್ತಮುತ್ತಲ ಜಮೀನುಗಳಿಗೆ ಆಗಾಗ್ಗೆ ನುಗ್ಗಿ ಹಸು, ಕುರಿ, ನಾಯಿಗಳನ್ನು ಸೇರಿದಂತೆ ಸಾಕು ಪ್ರಾಣಿಗಳ ಮೇಲೆ ದಾಳಿ ನೆಡೆಸುತ್ತಿದ್ದ ಚಿರತೆಯ ಬಗ್ಗೆ ಮಾಹಿತಿ ಅರಿತ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆಯ ಸೆರೆಗೆ ಕಾರ್ಯ ರೂಪಿಸಿ ಮೂಗಣ್ಣ ಎಂಬವರ ಜಮೀನಿನಲ್ಲಿ ಬೋನಿಟ್ಟು ಚಿರತೆಯನ್ನು ಸೆರೆಹಿಡಿದಿದ್ದು, ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News