ಚಾಮರಾಜನಗರ: ಕಂಟೈನರ್ ಢಿಕ್ಕಿಯಾಗಿ ರಸ್ತೆ ಮಧ್ಯೆ ಮಗುಚಿದ ಲಾರಿ

Update: 2024-04-18 05:14 GMT

ಚಾಮರಾಜನಗರ :  ಕಂಟೈನರ್ ಮತ್ತು ಲಾರಿ ಮಧ್ಯೆ ನಡೆದ ಅಪಘಾತದಲ್ಲಿ, ಲಾರಿಯೊಂದು ರಸ್ತೆಯಲ್ಲೇ ಮಗುಚಿ ಬಿದ್ದ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡು ಜಿಲ್ಲೆ ದಿಂಬಂ ಘಾಟ್ ನಲ್ಲಿ ಗುರುವಾರ ನಡೆದಿದೆ.

ಈರೋಡ್ ನಿಂದ ಚಾಮರಾಜನಗರ ಕಡೆಗೆ ಬರುತ್ತಿದ್ದ ಸರಕು ಹೊತ್ತ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ದಿಂಬಂ ಘಾಟ್ ನ 15 ನೇ ತಿರುವಿನಲ್ಲಿ ಎದುರಿಗೆ ಬರುತ್ತಿದ್ದ ಲಾರಿಯೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ಮಗುಚಿದೆ. ಇದರಿಂದಾಗಿ ಕೆಲವು ಗಂಟೆಗಳ ಕಾಲ ವಾಹನ ಸಂಚಾರ ಬಂದ್ ಆಗಿತ್ತು.

ತಮಿಳುನಾಡು ಪೊಲೀಸರು ಆಗಮಿಸಿ ರಸ್ತೆ ತೆರವು ಗೊಳಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಘಟನೆಯಿಂದಾಗಿ ಗಂಟೆ ಗಟ್ಟಲೆ ಎರಡೂ ರಾಜ್ಯಗಳ ನಡುವೆ ಸಂಚಾರ ಬಂದ್ ಆಗಿ, ರಾಷ್ಟ್ರೀಯ ಹೆದ್ದಾರಿಯ ಇಕ್ಕಡೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News