ಚಾಮರಾಜನಗರ | ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Update: 2024-04-18 09:26 GMT
ಸಾಂದರ್ಭಿಕ ಚಿತ್ರ

ಚಾಮರಾಜನಗರ : ಜಿಲ್ಲೆಯ ಹನೂರು ಗುಂಡಿಮಾಳ ಗ್ರಾಮದಿಂದ ಹೊಸಪೋಡು ಗ್ರಾಮಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ.

ಮೃತ ವ್ಯಕ್ತಿಯನ್ನು ಒಡೆಯರ ಪಾಳ್ಯ ಸಮೀಪದ ಹೊಸ ಪೋಡು ಗ್ರಾಮದ ಹೀರಾ (61) ಎಂದು ಗುರುತಿಸಲಾಗಿದೆ. ಕಾರ್ಯನಿಮಿತ್ತ ಒಡೆಯರ ಪಾಳ್ಯ ಗ್ರಾಮಕ್ಕೆ ಆಗಮಿಸಿದ್ದ ಹೊಸ ಫೋಡು ಗ್ರಾಮದ ನಿವಾಸಿ ಹೀರಾ ಕೆಲಸ ಮುಗಿದ ಮೇಲೆ ಗುಂಡಿಮಾಳದ ವರಗೆ ಬಸ್ ನಲ್ಲಿ ಪ್ರಯಾಣಿಸಿ ನಂತರ ಹೊಸ ಪೋಡು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದೆ. ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಬುಧವಾರ ಒಡೆಯರಪಾಳ್ಯ ಗ್ರಾಮಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದ ಹೀರಾ ಗುರುವಾರ ಬೆಳಗ್ಗೆ ಆದರೂ ಬಾರದೇ ಇರುವುದರಿಂದ ಕುಟುಂಬಸ್ಥರು ಅರಣ್ಯದಲ್ಲಿ ಹುಡುಕುತ್ತಿದ್ದ ವೇಳೆ ಹೀರಾ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ . ಮಾಹಿತಿ ಪಡೆದ ಹನೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಘಟನಾಸ್ಥಳಕ್ಕೆ ತೆರೆಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News