×
Ad

Chamarajanagar | ಕೆಎಸ್ಸಾರ್ಟಿಸಿ ಬಸ್-ಬೈಕ್ ನಡುವೆ ಅಪಘಾತ; ಸವಾರ ಮೃತ್ಯು, ಓರ್ವ ಆಸ್ಪತ್ರೆಗೆ ದಾಖಲು

Update: 2026-01-27 11:48 IST

ಚಾಮರಾಜನಗರ : ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರರೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬ ಸಹಸವಾರ ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಹರವೆ ಹೋಬಳಿಯ ಮಲೆಯೂರು ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ತಾಲ್ಲೂಕಿನ ಹರವೆ ಹೋಬಳಿಯ ಮಲೆಯೂರು ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ರಸ್ತೆ ಅಪಘಾತವಾಗಿದ್ದು, ಬೈಕ್ ಸವಾರ ಶಿವಸ್ವಾಮಿ ಆಲಿಯಾಸ್ ಪುಟ್ಟ (30) ಎಂಬಾತ ಸ್ಥಳದಲ್ಲೇ ಮೃತಪಟ್ಟದ್ದಾರೆ. ಮತ್ತೊಬ್ಬ ಸವಾರನಿಗೆ ಪೆಟ್ಟಾಗಿದ್ದು, ಆಂಬುಲೆನ್ಸ್ ಮೂಲಕ ಸಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.

ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿ ತನಿಖೆ ಕಾರ್ಯ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News