ಚಾಮರಾಜನಗರ: ಕಾರು ಪಲ್ಟಿ; ಅಪಾಯದಿಂದ ಪಾರಾದ ಪ್ರಯಾಣಿಕರು

Update: 2024-04-16 04:02 GMT

ಚಾಮರಾಜನಗರ: ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಮೂವರು ಪಾರಾದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಅರೇಪುರ ಗೇಟ್ ಬಳಿ ನಡೆದಿದೆ.

ಕೇರಳದ ಕೋಝಿಕೋಡ್‌ನಿಂದ ಬೆಂಗಳೂರಿಗೆ ಮೂವರು ತೆರಳುತ್ತಿದ್ದರು. ಈ ವೇಳೆ ತೂಕಡಿಸಿದ ಚಾಲಕ ದಿಢೀರ್ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು  ಅರೇಪುರ ಗೇಟ್ ಸಮೀಪ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿಯಾಗಿ ಪಲ್ಟಿಯಾಗಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೇಗೂರು ಪೊಲೀಸರು ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News