×
Ad

ಚಾಮರಾಜನಗರ | ಗೂಡ್ಸ್ ವಾಹನ, ಬೈಕ್ ನಡುವೆ ಢಿಕ್ಕಿ : ಓರ್ವ ಮೃತ್ಯು

Update: 2024-06-03 12:19 IST

ಚಾಮರಾಜನಗರ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ, ಓರ್ವ ಮೃತಪಟ್ಟಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಗ್ರಾಮದ ಬಳಿ ನಡೆದಿರುವುದಾಗಿ ವರದಿಯಾಗಿದೆ.

ಮೃತ ಬೈಕ್‌ ಸವಾರನ್ನು ಕೋಣಕೆರೆ ಗ್ರಾಮದ ಗಿರೀಶ್ (18) ಎಂದು ಗುರುತಿಸಲಾಗಿದೆ. ಅಲ್ಲದೆ, ಬೈಕ್ ನಲ್ಲಿದ್ದ  ಮತ್ತೋರ್ವ ಮಹದೇವಸ್ವಾಮಿ ಎಂಬಾತನಿಗೂ ಗಂಭೀರ ಗಾಯವಾಗಿದ್ದು, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ತಮಿಳುನಾಡಿನ ಕಡೆ ತೆರಳುತ್ತಿದ್ದ ಗೂಡ್ಸ್ ವಾಹನ ಹಾಗೂ ಕೋಣನಕೆರೆ ಗ್ರಾಮದಿಂದ ಕೌದಳ್ಳಿಯತ್ತ ತೆರಳುತ್ತಿದ್ದಂತಹ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಈ ಹಿನ್ನಲೆಯಲ್ಲಿ  ತೀವ್ರ ಗಾಯಗೊಂಡಿದ್ದ ಬೈಕ್ ಸವಾರರಿಬ್ಬರನ್ನು ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಆಸ್ಪತ್ರೆಗೆ ರವಾನೆ ಮಾಡುತ್ತಿದ್ದಾಗ ಮಾರ್ಗ ಮಧ್ಯೆ ಗಿರೀಶ್ ಎಂಬಾತ ಮೃತಪಟ್ಟರೆ ಮಹದೇವಸ್ವಾಮಿಯನ್ನು ಚಿಕಿತ್ಸೆಗಾಗಿ ಕೊಳ್ಳೆಗಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News