×
Ad

ಚಾಮರಾಜನಗರ | ಕಲುಷಿತ ನೀರು ಸೇವಿಸಿ ನಾಲ್ವರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Update: 2024-11-06 17:29 IST

ಚಾಮರಾಜನಗರ : ಕಲುಷಿತ ನೀರು ಸೇವಿಸಿದ ನಾಲ್ವರು ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ 23ನೇ ವಾರ್ಡ್ ನೂರ್ ಮೊಹಾಲ್ಲಾ 7ನೇ ಕ್ರಾಸ್ ನಿವಾಸಿಗಳಾದ ಆಯಾನ್ ಷರೀಪ್ (5), ರಿಜ್ವಾನ್ ಖಾನ್(19) ಐಷಾ(15) ಸಿಮ್ರಾನ್(22) ಎಂಬವರಿಗೆ ವಾಂತಿ-ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ‌ ಎಂದು ತಿಳಿದು ಬಂದಿದೆ.

ಅಯಾನ್ ಷರೀಪ್, ಐಷಾ ಅವರಿಗೆ ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News