×
Ad

ಚಾಮರಾಜನಗರ: ಕೆಎಸ್ಸಾರ್ಟಿಸಿ ಬಸ್-ಗೂಡ್ಸ್ ಆಟೋ ಢಿಕ್ಕಿ; ಓರ್ವ ಮೃತ್ಯು

Update: 2024-01-27 14:03 IST

ಚಾಮರಾಜನಗರ: ಕೆಎಸ್ಸಾರ್ಟಿಸಿ ಬಸ್ ಮತ್ತು ಗೂಡ್ಸ್ ಆಟೋ ಮುಖಾಮುಖಿ ಢಿಕ್ಕಿಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಲಕ್ಕೂರು ಬಳಿ ಶನಿವಾರ ಮದ್ಯಾಹ್ನ ನಡೆದಿದೆ.

ಮೃತನನ್ನು ಸಿದ್ದರಾಜು ಕುಮಾರ್ ಬಿನ್ ಜವರಯ್ಯ (33)‌ ಎಂದು ಗುರುತಿಸಲಾಗಿದೆ.  ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಿಂದ 4 ಗೂಡ್ಸ್ ಆಟೋದಲ್ಲಿ ಚಿಕ್ಕಲ್ಲೂರು ಜಾತ್ರೆಗೆ ಭಕ್ತರು ತೆರಳುತ್ತಿರುವಾಗ ಮೂರನೇ ಆಟೋ ಅತಿ ವೇಗದಿಂದಾಗಿ ಓವರ್ ಟೇಕ್ ಮಾಡಲು ಮುನ್ನುಗಿದಾಗ ಚಾಮರಾಜನಗರ ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಚಾಮರಾಜನಗರ ಸಿಮ್ಸ್ ಆಸ್ಪತ್ರೆ ಗೆ ಸಾಗಿಸಲಾಗಿದೆ. ತೆರಕಣಾಂಬಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News