×
Ad

ಚಾಮರಾಜನಗರ : ಹೊಂಗನೂರಿನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿದ ಕಿಡಿಗೇಡಿಗಳು

Update: 2026-06-19 12:05 IST

ಚಾಮರಾಜನಗರ : ಹೊಂಗನೂರು ಗ್ರಾಮದ ಬೀದಿಯ ರಸ್ತೆ ಬದಿಯಲ್ಲಿದ್ದ ಅಂಬೇಡ್ಕರ್, ಬುದ್ದ, ಬಸವ ಭಾವಚಿತ್ರ ಇರುವ ಬೊರ್ಡ್ ಗೆ ಕಿಡಿಗೇಡಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿದಿರುವುದು ಬೆಳಕಿಗೆ ಬಂದಿದೆ.

ಕಳೆದ ವಾರವಷ್ಟೆ ಚಾಮರಾಜನಗರ ತಾಲ್ಲೂಕಿನ ಮಸಣಾಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿದ ಪ್ರಕರಣ ಇನ್ನು ಜನರ ಮನದಲ್ಲಿ ಮಾಸದೇ ಇದೆ. ಇದರ ನಡುವೆ ಮಸಣಾಪುರ ಪಕ್ಕದ ಗ್ರಾಮವಾದ ಹೊಂಗನೂರಿನಲ್ಲೂ ಸಹ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿಯಲಾಗಿದೆ.

ಹೊಂಗನೂರು ಗ್ರಾಮದಲ್ಲಿ ನಡೆದಿರುವ ಈ ಕೃತ್ಯ ದಲಿತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದ್ದು, ಗ್ರಾಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. 

ಹೊಂಗನೂರು ಗ್ರಾಮಕ್ಕೆ ದಲಿತ ಸಂಘಟನೆಗಳ ಮುಖಂಡರುಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಗ್ರಾಮದಲ್ಲಿ ಪ್ರಸ್ತುತ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News