×
Ad

ಕೊಳ್ಳೇಗಾಲ | ವಿದ್ಯುತ್​ ತಂತಿ ಸ್ಪರ್ಶಿಸಿ ಆನೆ ಸಾವು

Update: 2024-11-03 14:41 IST

ವಿದ್ಯುತ್‌ ತಂತಿ ಸ್ಪರ್ಶಿಸಿ ಆನೆ ಸಾವು

ಕೊಳ್ಳೇಗಾಲ : ಇಲ್ಲಿನ ಕೊಳ್ಳೇಗಾಲ ತಾಲೂಕಿನ ಕೊತ್ತನೂರು ಸಮೀಪ ಚಪ್ಪದ ಹಳ್ಳ ಬಯಲು ಕಾಡಿಗೆ ಹೊಂದಿಕೊಂಡಂತೆ ಇರುವ ಜಮೀನಿನ ಬಳಿ ವಿದ್ಯುತ್‌ ತಂತಿಗೆ ಸಿಲುಕಿ ಆನೆಯೊಂದು ಮೃತಪಟ್ಟಿರುವ ಘಟನೆ ಜರುಗಿದೆ.

ಕೊತ್ತನೂರು ಗ್ರಾಮದ ನಿವಾಸಿ ಖ್ಯಾತಯ್ಯ ಇವರ ಜಮೀನಿಗೆ ಹೊಂದಿಕೊಂಡಂತೆ ಅರಣ್ಯ ಪ್ರದೇಶದಲ್ಲಿ ಪಂಪ್ ಸೆಟ್‌ಗೆ ಎಳೆಯಲಾಗಿದ್ದ ವಿದ್ಯುತ್‌ ತಂತಿಯು ಆನೆಯ ಸೊಂಡಿಲಿಗೆ ಸಿಲುಕಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಗ್ರಾಮಸ್ಥರಿಂದ ವಿಷಯ ತಿಳಿದ ಕಾವೇರಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಸುಂದರ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಆನೆ ಮೃತಪಟ್ಟಿರುವುದನ್ನು ಖಾತರಿಪಡಿಸಿಕೊಂಡಿದ್ದಾರೆ.

ನಂತರ ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿಗಳು ಆನೆ ಸಾವಿನ ಬಗ್ಗೆ ಮಾಹಿತಿ ಪಡೆದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News