ಚಿಕ್ಕಮಗಳೂರು | ಮನೆಗಳ ಮೇಲೆ ಕಲ್ಲು ತೂರಾಟ ಪ್ರಕರಣ: ಆರೋಪಿಗಳಾದ ಭರತ್, ದಿಲೀಪ್, ಹರೀಶ್ ಬಂಧನ
Update: 2026-02-19 09:20 IST
ಚಿಕ್ಕಮಗಳೂರು: ಇತ್ತೀಚೆಗೆ ನಗರದ ವಿಜಯಪುರ ಬಡಾವಣೆಯಲ್ಲಿ ಮನೆ ಮೇಲೆ ಕಲ್ಲು ಎಸೆದ ಪ್ರಕರಣ ಹಾಗೂ ನಂತರ ನಡೆದ ಗಲಭೆಗೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಗೌರಿ ಕಾಲುವೆಯ ಭರತ್ (23), ರಾಮನಹಳ್ಳಿಯ ದಿಲೀಪ್ (27) ಹಾಗೂ ಬೈಕ್ ಮಾಲೀಕ ಹರೀಶ್ ಅವರನ್ನು ಬಂಧಿಸಲಾಗಿದೆ.
ಈ ಯುವಕರು ಘಟನೆ ನಡೆಯುವ ಮೂರು ದಿನಗಳ ಹಿಂದಿನಿಂದಲೇ ದೂರುದಾರರ ಮನೆಯ ಸುತ್ತ ಬೈಕಿನಲ್ಲಿ ಓಡಾಡುತ್ತಾ ಅವರನ್ನು ಹಿಂಬಾಲಿಸುತ್ತಿದ್ದ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಅಲ್ಲದೆ, ದೂರುದಾರರೊಂದಿಗೆ ಒಮ್ಮೆ ವಾಗ್ವಾದ ನಡೆದಿರುವುದೂ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.