×
Ad

ಚಿಕ್ಕಮಗಳೂರು: ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Update: 2023-09-24 11:01 IST

ಚಿಕ್ಕಮಗಳೂರು, ಸೆ.24: ಗಣೇಶೋತ್ಸವದ ಗಣಪತಿ ವಿಸರ್ಜನೆ ವೇಳೆ ಯುವಕನೋರ್ವ ಕೆರೆ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಗಣೇಶ್ (25) ಎಂದು ಗುರುತಿಸಲಾಗಿದೆ.

ಕುರುಬರಹಳ್ಳಿ ಕೆರೆಯಲ್ಲಿ ಕಳೆದ ರಾತ್ರಿ ಗಣಪತಿ ವಿಸರ್ಜನೆ ವೇಳೆ ಈ ದುರ್ಘಟನೆ ಸಂಭವಿಸಿದೆ.

ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News