×
Ad

Chikkamagaluru | ಬಿಜೆಪಿ ಮುಖಂಡನಿಂದ ಮುಸ್ಲಿಮರ ಅವಹೇಳನ ಆರೋಪ: ದೂರು ದಾಖಲು

Update: 2026-05-23 18:46 IST

ಚಿಕ್ಕಮಗಳೂರು: ರಸ್ತೆ ಕಾಮಗಾರಿ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ವೇಳೆ ಬಿಜೆಪಿ ಮುಖಂಡನೋರ್ವ ಮುಸ್ಲಿಮರ ವಿರುದ್ಧ ಅವಾಚ್ಯ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ.

ಮೇ 21ರಂದು ಕಾಮಗಾರಿ ವೀಕ್ಷಣೆ ಮಾಡುವ ಸಂದರ್ಭದಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸಮ್ಮುಖದಲ್ಲೇ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದರು. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.

ಇದೇ ಗಲಾಟೆಯ ನಡುವೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಮುಸ್ಲಿಮ್ ಸಮುದಾಯದ ಕುರಿತು ಅವಾಚ್ಯ ಪದಗಳನ್ನು ಬಳಸಿದ್ದಾರೆ. ಇದು ಮುಸ್ಲಿಮರ ಘನತೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಎಸ್‌ಡಿಪಿಐ ಮುಖಂಡ ಅಜ್ಮತ್ ಪಾಶ, ಅಂಜುಮನ್ ಇಸ್ಲಾಮಿಯ ಕಮಿಟಿಯ ಅಝ್ನಾನ್ ಪಾಶ ಹಾಗೂ ಜಾಮಿಯಾ ಮಸೀದಿ ಸದಸ್ಯ ಮುದಸ್ಸಿರ್ ಎಂಬವರು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಸಂತೋಷ್ ಕೋಟ್ಯಾನ್ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಿ ಬಂಧಿಸದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಸಿರುವ ಮುಖಂಡರು, ಪೊಲೀಸರಿಗೆ ರವಿವಾರದವರೆಗೆ ಕಾಲಾವಕಾಶ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News