×
Ad

ಕಡೂರು: ಬೈಕ್ ಸವಾರರಿಬ್ಬರ ಮೇಲೆ ಚಿರತೆ ದಾಳಿ

Update: 2025-07-31 13:26 IST

ಚಿಕ್ಕಮಗಳೂರು: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದ ಮದಗದ ಕೆರೆ ಸಮೀಪ ನಡೆದಿದೆ.

ಹೊಸ ಸಿದ್ಧರಹಳ್ಳಿಯ ಮಂಜಪ್ಪ(56) ಮತ್ತು ಹಳೇ ಸಿದ್ಧರಹಳ್ಳಿಯ ಮೂರ್ತಪ್ಪ(55) ಗಾಯಗೊಂಡವರು. ಅವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇವರಿಬ್ಬರು ಸಖರಾಯಪಟ್ಟಣಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾ ಚಿರತೆ ಅವರ ಮೇಲೆ ಎರಗಿದೆ. ಮೂರ್ತಣ್ಣ ಅವರ ತಲೆ, ಕೈಗಳಿಗೆ ಮತ್ತು ಮಂಜಪ್ಪರ ಎಡಗೈಗೆ ಗಾಯವಾಗಿದೆ. ಸಮೀಪ ಇದ್ದವರು ಓಡಿ ಬಂದು ಕೂಗಾಡಿ ಇಬ್ಬರನ್ನು ರಕ್ಷಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ನೂರಾರು ಮಂದಿ ಕಲ್ಲಿನಿಂದ ಹೊಡೆದು ಚಿರತೆಯನ್ನು ಅಟ್ಟಾಡಿಸಿದರು.

‘ಎಮ್ಮೆದೊಡ್ಡಿ ಗ್ರಾಮದ ಸುತ್ತಮುತ್ತಲ ಅರಣ್ಯದಲ್ಲಿ ಚಿರತೆಗಳಿದ್ದು, ರಸ್ತೆಯಲ್ಲಿ ಸಾಗುವವರ ಮೇಲೆ ದಾಳಿ ನಡೆಸುತ್ತಿವೆ. ಚಿರತೆಗಳನ್ನು ಹಿಡಿದು ಸ್ಥಳಾಂತರ ಮಾಡಬೇಕು’ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News