×
Ad

ಗೋಣಿಬೀಡು: ಕಾಲು ಜಾರಿ ಕೆರೆಗೆ ಬಿದ್ದು ಕಾರ್ಮಿಕ ಮೃತ್ಯು

Update: 2024-11-18 22:07 IST

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಗೋಣಿಬೀಡು ಗ್ರಾಮದ ನಿವಾಸಿ ಬೂತಯ್ಯ(55) ಎಂದು ಗುರುತಿಸಲಾಗಿದೆ. ಭೂತಯ್ಯ ಗೋಣಿಬೀಡು ಗ್ರಾಮದ ಹಾಸನ್‍ಗೌಡ ಎಂಬವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಸೋಮವಾರ ತೋಟಕ್ಕೆ ಕೆಲಸಕ್ಕೆ ಬಂದಿದ್ದ ಅವರು, ತೋಟಕ್ಕೆ ಹೊಂದಿಕೊಂಡಿದ್ದ ಕೆರೆ ಬಳಿ ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದಿದ್ದಾರೆ. ಕೆರೆಗೆ ಬಿದ್ದ ಭೂತಯ್ಯ ಅವರಿಗೆ ಈಜಲು ಬಾರದೇ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು.

ಸುದ್ದಿ ತಿಳಿದ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಮೂಡಿಗೆರೆ ಸಾಮಾಜಿಕ ಸಕ್ರೀಯ ತಂಡದ ಸದಸ್ಯರು ಮೃತದೇಹ ಪತ್ತೆ ಮಾಡಿದ್ದಾರೆ. ಘಟನೆ ಸಂಬಂಧ ಗೋಣೀಬೀಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News