×
Ad

ಮಲೆನಾಡಲ್ಲಿ ಭಾರೀ ಮಳೆ; ರಸ್ತೆಗೆ ನುಗ್ಗಿದ ತುಂಗಾ ನದಿ ನೀರು

Update: 2025-07-27 10:55 IST

ಚಿಕ್ಕಮಗಳೂರು : ಮಲೆನಾಡಲ್ಲಿ ಭಾರೀ ಮಳೆ ಮುಂದುವರಿದಿದ್ದು, ಶೃಂಗೇರಿಯಲ್ಲಿ ತುಂಗಾ ನದಿ ತುಂಬಿ ನೀರು ರಸ್ತೆಗೆ ಹರಿಯುತ್ತಿದೆ.

ನಿರಂತರ ಗಾಳಿ-ಮಳೆಯಿಂದ ಮಲೆನಾಡಿಗರು ಹೈರಾಣಾಗಿದ್ದು, ರಸ್ತೆಯಲ್ಲಿ ಒಂದೂವರೆ-ಎರಡು ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ.

ಶೃಂಗೇರಿಯ ಕೆರೆಕಟ್ಟೆ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗಾಂಧಿ ಮೈದಾನ, ಶರದಾಂಭೆ ದೇಗುಲದ ವಾಹನಗಳ ಪಾರ್ಕಿಂಗ್ ಜಾಗವೂ ಸಂಪೂರ್ಣ ಜಲಾವೃತ ಗೊಂಡಿದೆ.

ಶೃಂಗೇರಿ-ಮಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ :

ಶೃಂಗೆರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ಗುಡ್ಡ ಕುಸಿತದಿಂದ ಶೃಂಗೇರಿ-ಮಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಆಗುಂಬೆ ಘಾಟ್‌ನ ಉಡುಪಿ ಮೂಲಕ ಬದಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News