×
Ad

ಚಿತ್ರದುರ್ಗ: ಲಾರಿಗೆ ಕಾರು ಢಿಕ್ಕಿ; ಮಗು ಸಹಿತ ನಾಲ್ವರು ಮೃತ್ಯು

Update: 2024-06-15 11:32 IST

ಚಿತ್ರದುರ್ಗ : ಬೆಂಗಳೂರಿನಿಂದ ಗೋವಾಕ್ಕೆ ತೆರಳುತಿದ್ದ ಫಾರ್ಚುನರ್ ಕಾರೊಂದು ಲಾರಿಗೆ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪ್ಟಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು ಬಳಿ ನಡೆದಿದೆ.

ಮೃತರನ್ನು ಪ್ರಜ್ವಲ್ ರೆಡ್ಡಿ(30), ಹರ್ಷಿತಾ(28), ಸೋಹನ್ (2) ಹಾಗು ವಿಜಯ್ ರೆಡ್ಡಿ(30) ಎಂದು ಗುರುತಿಸಲಾಗಿದೆ.

ಬೆಂಗಳೂರಿನ ತಣಿಸಂದ್ರ ಮೂಲದ 8 ಮಂದಿ ಫಾರ್ಚುನರ್‌ ಕಾರಿನಲ್ಲಿ ಗೋವಾಕ್ಕೆ ಹೊರಟಿದ್ದರು. ಈ ವೇಳೆ ಟೈರ್ ಸಿಡಿದು ರಸ್ತೆಯಲ್ಲಿ ನಿಧಾನವಾಗಿ ಚಲಿಸುತಿದ್ದ ಕಂಟೇನರ್ ಲಾರಿಗೆ, ಅತಿವೇಗದಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದ್ದು,  ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ವೇಳೆ ಘಟನಾ ಸ್ಥಳದಲ್ಲಿದ್ದ ಸ್ಥಳಿಯರು ಗಂಭೀರವಾಗಿ ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬಳಿಕ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಮತ್ತೋರ್ವ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಈ ಪ್ರಕರಣ ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News