×
Ad

ಚಿತ್ರದುರ್ಗ: ಅಕ್ರಮವಾಗಿ ಸಂಗ್ರಹಿಸಿದ್ದ ಆನೆದಂತ, ಶ್ರೀಗಂಧ, ರಕ್ತಚಂದನ ಪೊಲೀಸ್ ವಶ

Update: 2023-11-11 13:19 IST

ಚಿತ್ರದುರ್ಗ:  ಬಬ್ಬೂರು ಗ್ರಾಮ ಬಳಿಯ ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಸಂಗ್ರಹಿಸಿದ್ದ ಆನೆದಂತ, ಶ್ರೀಗಂಧ, ರಕ್ತಚಂದನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿ ವಾಸಿಸುತ್ತಿರುವ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮೂಲದ ಚಂದ್ರಶೇಖರ್ ಹಾಗೂ ತಮಿಳುನಾಡು ಮೂಲದ ಖಲೀಲ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸೌದೆ ವ್ಯಾಪಾರ ಮಾಡುವುದಾಗಿ ಹೇಳಿ‌ ನಾರಾಯಣಪ್ಪ ಎಂಬುವರ ಮನೆ ಲೀಸ್ ಗೆ ಪಡೆದಿದ್ದ ಆರೋಪಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಖಚಿತ ಮಾಹಿತಿ ಮೇರೆಗೆ ಚಿತ್ರಹಳ್ಳಿ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳಿಂದ ಅಕ್ರಮವಾಗಿ ಸಂಗ್ರಹಿಸಿದ್ದ 3ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚಿತ್ರದುರ್ಗ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ಅಧಿಕೃತ ಮಾಹಿತಿ ನೀಡಿದ್ದಾರೆ.

 



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News