×
Ad

Bantwal | ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ರಮಾನಾಥ ರೈ ನೇತೃತ್ವದಲ್ಲಿ ಧರಣಿ

Update: 2026-03-03 17:04 IST

ಬಂಟ್ವಾಳ : ತಾಲೂಕಿನ ಬ್ರಹ್ಮರಕೂಟ್ಲುವಿನಲ್ಲಿ ಕಾರ್ಯಾಚರಿಸುತ್ತಿರುವ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಮಾಜಿ ಸಚಿವ ಬಿ.ರಮಾನಾಥ್ ರೈ ನೇತೃತ್ವದಲ್ಲಿ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿಯ ವತಿಯಿಂದ ಸಮಾನ ಮನಸ್ಕ ಸಂಘಟನೆಗಳಿಂದ ಸಾಮೂಹಿಕ ಧರಣಿ ಮಂಗಳವಾರ ಟೋಲ್ ಗೇಟ್ ಬಳಿ ನಡೆಯಿತು.

ಧರಣಿಯನ್ನು‌ ಉದ್ದೇಶಿಸಿ ಮಾತನಾಡಿ ರಮಾನಾಥ ರೈ ಅವರು, ಅವೈಜ್ಞಾನಿಕ ಮತ್ತು ಅಸಮರ್ಪಕವಾಗಿ ಕಾರ್ಯಾಚರಣೆ ನಡೆಸುತ್ತಿರುವ ಈ ಟೋಲ್ ಗೇಟ್ ಅನ್ನು ಕೂಡಲೇ ತೆರವು ಗೊಳಿಸಬೇಕು ಎಂದು ಆಗ್ರಹಿಸಿದರು.

ಬ್ರಹ್ಮರಕೊಟ್ಲು ಟೋಲ್ ಪ್ಲಾಜಾ ಕಳೆದ 13 ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳ ವಿರುದ್ಧವಾಗಿ ಟೋಲ್ ಸಂಗ್ರಹಿಸುತ್ತಿದ್ದು, ಇದು ಜನತೆಗೆ ಮಾಡುವ ಮಹಾಮೋಸ ಮತ್ತು ಹಗಲು ದರೋಡೆ ಆಗಿದೆ. ಇದರ ವಿರುದ್ಧ ಪಕ್ಷಾತೀತವಾಗಿ ಸಂಘಟಿತವಾಗಿ ಸಕ್ರಿಯ ಹೋರಾಟಗಳನ್ನು ನಿರಂತರ ಮಾಡುವ ಮೂಲಕ ಬ್ರಹ್ಮರಕೋಟ್ಲು ಟೋಲ್ ಅನ್ನು ಶಾಶ್ವತವಾಗಿ ರದ್ದುಗೊಳಿಸಬಹುದು‌. ಇಂದು ಧರಣಿ ಆರಂಭ ಅಷ್ಟೇ, ಮುಂದಿನ ದಿನಗಳಲ್ಲಿ ಈ ಬಗ್ಗೆ ಅವಿರತವಾಗಿ ಹೋರಾಟ ನಡೆಸಲಾಗುವುದು. ಪ್ರತೀ ಹಂತದಲ್ಲೂ ನೀವೆಲ್ಲರೂ ಸಹಕರಿಸಬೇಕು ಎಂದು ಕರೆ ನೀಡಿದರು.

ವಿವಿಧ ಸಂಘ ಸಂಸ್ಥೆಗಳ ಪ್ರಮುಖರಾದ ಮುನೀರ್ ಕಾಟಿಪಳ್ಳ, ಎಂ.ಜಿ.ಹೆಗ್ಡೆ, ಸುಹೈಲ್ ಖಂದಕ್, ನ್ಯಾಯವಾದಿ ಸುರೇಶ್, ಅಶ್ವಿನಿ ಕುಮಾರ್ ರೈ, ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸದಾಶಿವ ಪಡುಬಿದ್ರಿ, ಸುನಿಲ್ ಕುಮಾರ್ ಬಜಾಲ್, ಮಂಜುಳಾ ನಾಯಕ್, ಮಮತಾ ಗಟ್ಟಿ, ಎ.ರಾಮಣ್ಣ ವಿಟ್ಲ, ಬಿ.ಎಂ.ಭಟ್, ಹೇಮನಾಥ ಶೆಟ್ಟಿ ಕಾವು ಮೊದಲಾದವರು ಧರಣಿಯನ್ನು ಉದ್ದೇಶಿಸಿ ಮಾತನಾಡಿದರು.

ಸಮಿತಿಯ ಸಂಚಾಲಕರಾದ ಬಿ.ಶೇಖರ್ ಸ್ವಾಗತಿಸಿ, ಮೋಹನ್ ಶೆಟ್ಟಿ ವಂದಿಸಿದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News