×
Ad

ಕೋಟ ಶ್ರೀನಿವಾಸ್ ಪೂಜಾರಿ ಅವರಿಂದ ತೆರವಾದ ವಿಧಾನ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Update: 2024-09-19 17:13 IST

ಮಂಗಳೂರು: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಂದ ತೆರವಾದ ವಿಧಾನ ಪರಿಷತ್‌ನ ಉಪ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗವು ದಿನಾಂಕ ನಿಗದಿಪಡಿಸಿ ಆದೇಶಿಸಿದೆ.

ಅ. 21ರಂದು ಉಪ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಅ. 3 ಕೊನೆಯ ದಿನವಾಗಿದೆ. ಅ. 21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅ. 24ರಂದು ಮತ ಎಣಿಕೆ ನಡೆಯಲಿದೆ.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ್ ಪೂಜಾರಿಯವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರಿಂದ ತೆರವಾಗಿರುವ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News