×
Ad

ಇಂದಬೆಟ್ಟು: ಎದೆನೋವಿಗೆ ಚಿಕಿತ್ಸೆಗೆ ತೆರಳಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತ್ಯು

Update: 2025-07-01 14:19 IST

ಬೆಳ್ತಂಗಡಿ : ಎದೆನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದ ವ್ಯಕ್ತಿ ಅಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆಯಲ್ಲಿ ಸೋಮವಾರ ರಾತ್ರಿ ನಡೆದಿದೆ‌.

ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ(53) ಮೃತ ವ್ಯಕ್ತಿ.  ಆರೋಗ್ಯವಾಗಿದ್ದ ವಜ್ರಾಕ್ಷ ಪೂಜಾರಿ ದಿನನಿತ್ಯದಂತೆ ಸೋಮವಾರವೂ (ಜೂ.30) ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಬಂದಿದ್ದರು. ರಾತ್ರಿ ವೇಳೆ ಎದೆನೋವು ಕಾಣಿಸಿದ ಹಿನ್ನೆಲೆಯಲ್ಲಿ ತನ್ನ ಸ್ಕೂಟರ್ ನಲ್ಲಿ  ಉಜಿರೆ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಮುಂದಾದಾಗಿದ್ದಾರೆ. ಈ ವೇಳೆ ಕುಸಿದು ಬಿದ್ದಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

 ಮೃತರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News