×
Ad

ಮಂಗಳೂರು: ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Update: 2023-08-19 12:40 IST

ಮಂಗಳೂರು, ಆ.19: ನಗರದ ಉರ್ವಸ್ಟೋರ್ ಮೈದಾನದ ಬಳಿಯ ದಿನಸಿ ಅಂಗಡಿಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉರ್ವ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ನಗರದ ಚಿಲಿಂಬಿಯ ಗೋಕುಲದಾಸ ಶೆಣೈ ಮತ್ತು ಕೋಡಿಕಲ್ ನಿವಾಸಿ ದೀಪಕ್ ಶೆಟ್ಟಿ ಬಂಧಿತ ಆರೋಪಿಗಳು.

ಮಟ್ಕಾ ದಂಧೆಗೆ ಬಳಸಿದ್ದ 4,24,490 ರೂ. ನಗದು, ಮೊಬೈಲ್ ಫೋನ್ ಹಾಗೂ ಮಟ್ಕಾ ಬರೆದಿದ್ದ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ.

ಉರ್ವ ಠಾಣೆಯ ಇನ್ ಸ್ಪೆಕ್ಟರ್ಗಳಾದ ಭಾರತಿ, ಹರೀಶ್ ಎಚ್.ಎ. ಎಸ್ಸೈಗಳಾದ ಸಫೀನಾ, ವೆಂಕಟೇಶ್, ರಾಮಚಂದ್ರ, ಸುನೀತಾ, ಭರಣಿ ದೀಕ್ಷಿತ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News