×
Ad

ಮಂಗಳೂರು| ಸೆಲೂನ್‌ ನಲ್ಲಿ ದಾಂಧಲೆ ಪ್ರಕರಣ: ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರ ಬಂಧನ

Update: 2025-01-23 16:35 IST

ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಪ್ರಸಾದ್ ಅತ್ತಾವರನನ್ನು ಬಂಧಿಸಿದ ಪೊಲೀಸರು 

ಮಂಗಳೂರು: ನಗರದ ಬಿಜೈಯ ಸೆಲೂನ್‌ ನಲ್ಲಿ ದಾಂಧಲೆ ನಡೆಸಿದ ಪ್ರಕರಣದ ಆರೋಪಿ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ.

ನಗರ ಹೊರವಲಯದ ಕುಡುಪು ಬಳಿಯ ಮನೆಯಿಂದ ಪ್ರಸಾದ್ ಅತ್ತಾವರನನ್ನು ಬಂಧಿಸಲಾಗಿದೆ.

ನಗರದ ಸೆಲೂನ್‌ ಮೇಲೆ ರಾಮ ಸೇನಾ ಸಂಘಟನೆಯ ಕಾರ್ಯಕರ್ತರು ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರನನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಸಾದ್ ಅತ್ತವಾರ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಮ್ಮ ಸಂಘಟನೆಯ ಕಾರ್ಯಕರ್ತರು ಸೆಲೂನ್‌ ಗೆ ನುಗ್ಗಿರುವುದಾಗಿ ಪ್ರಸಾದ್ ಅತ್ತಾವರ ಒಪ್ಪಿಕೊಂಡಿರುವುದು ವರದಿಯಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News