×
Ad

ಜವಾಬ್ದಾರಿಯುತವಾಗಿ ಚುನಾವಣೆಯ ಕಾರ್ಯನಿರ್ವಹಿಸಿ: ದ.ಕ.ಜಿಲ್ಲಾಧಿಕಾರಿ ಸೂಚನೆ

Update: 2023-12-11 19:27 IST

ಮಂಗಳೂರು : ಚುನಾವಣಾ ಆಯೋಗವು ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಚೆನ್ನಾಗಿ ಅರಿತುಕೊಂಡು ಕಾರ್ಯನಿರ್ವಹಿಸಬೇಕು. ಚುನಾವಣಾ ಅಧಿಕಾರಿಗಳು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ಆಯೋಗವು ಸ್ಪಷ್ಟ್ಟವಾಗಿ ತಿಳಿಸಿದೆ. ಅದರಂತೆ ಪ್ರತಿಯೊಬ್ಬರು ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ ಹೇಳಿದರು.

ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಲೋಕಸಭಾ ಚುನಾವಣಾ ಪೂರ್ವಸಿದ್ದತೆಯ ನಿರ್ಣಾಯಕ ಮತಗಟ್ಟೆಗಳ ಗುರುತಿಸುವಿಕೆ ಬಗ್ಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಆತಂಕ, ಭಯರಹಿತವಾಗಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಪ್ರತಿಯೊಬ್ಬರು ಸಜ್ಜಾಗಬೇಕು. ಗಡಿ ಪ್ರದೇಶಗಳಾದ ಸುಳ್ಯ ಹಾಗೂ ಈಶ್ವರಮಂಗಳ, ತಲಪಾಡಿ, ಬಂಟ್ವಾಳ, ಬೆಳ್ತಂಗಡಿಯಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಬೇಕು. ಚುನಾವಣೆ ಸಂದರ್ಭ ಬೇಕಾಗುವ ಸಾಮಗ್ರಿಗಳನ್ನು 1 ಲಕ್ಷ ರೂ.ಒಳಗಡೆ ಭರಿಸಬೇಕು. ಅಗತ್ಯ ಸಾಮಗ್ರಿಗಳಿಗೆ ಹೆಚ್ಚಿನ ಒತ್ತು ನೀಡಿ ಖರೀದಿಸಿ ಎಂದು ಡಿಸಿ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೋಷ್ ಕುಮಾರ್, ಮಂಗಳೂರು ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ್ ಗೋಯಲ್, ದ.ಕ.ಜಿಲ್ಲಾ ಎಸ್ಪಿ ಸಿಬಿ ರಿಷ್ಯಂತ್, ಪುತ್ತೂರು ಎಸಿ ಗಿರೀಶ್ ನಂದನ್, ಮಂಗಳೂರು ಎಸಿ ಹರ್ಷವರ್ಧನ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News