ತುಮಕೂರಿನಲ್ಲಿ ಮೂವರ ಕೊಲೆ ಪ್ರಕರಣ: ಕುಟುಂಬಸ್ಥರನ್ನು ಭೇಟಿ ಮಾಡಿದ ವಕ್ಫ್ ಸಲಹಾ ಸಮಿತಿ

Update: 2024-03-28 12:48 GMT

ಬೆಳ್ತಂಗಡಿ : ತುಮಕೂರಿನಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ಕುಟುಂಬಸ್ಥರನ್ನು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತು ಕಾಜೂರು ಆಡಳಿತ ಸಮಿತಿಯ ನಿಯೋಗವು ಗುರುವಾರ ಭೇಟಿ ನೀಡಿ ಸಾಂತ್ವನ ಹೇಳಿತು.

ಕಾಜೂರು ಮಸೀದಿಯ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್, ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅವರ ನೇತೃತ್ವದ ನಿಯೋಗವು ಮೊದಲು ಶಾಹುಲ್ ಹಮೀದ್‌ರ ಕುಟುಂಬಸ್ಥರ ಮನೆಗೆ ಭೇಟಿ ನೀಡಿತು. ಆ ಬಳಿಕ ಇತರ ಎರಡೂ ಕುಟುಂಬವನ್ನು ಸಂಪರ್ಕಿಸಿ ಸಾಂತ್ವಾನ ಹೇಳಲಾಯಿತು.

ಮೂರೂ ಕುಟುಂಬಗಳಿಗೂ ಸ್ವಂತ ಮನೆ ಇಲ್ಲ. ಮನೆಯ ಯಜಮಾನನ್ನು ಕಳೆದುಕೊಂಡಿರುವ ಕುಟುಂಬದ ಸದಸ್ಯರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿವೆ. ಇದನ್ನು ಮನಗಂಡು ನಿಯೋಗವು ಮನೆ ನಿರ್ಮಾಣ ಸಂದರ್ಭ ಸೂಕ್ತವಾಗಿ ಸ್ಪಂದಿಸುವು ದಾಗಿ ಭರವಸೆ ನೀಡಿತು.

ನಿಯೋಗದಲ್ಲಿ ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯ ಅಶ್ರಫ್ ಕಿನಾರ, ಕಾಜೂರು ಆಡಳಿತ ಸಮಿತಿಯ ಅಧ್ಯಕ್ಷ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಹಾಗೂ ವಕ್ಫ್ ಸಲಹಾ ಸಮಿತಿ ಸದಸ್ಯ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಉಪಾಧ್ಯಕ್ಷ ಬದ್ರುದ್ದೀನ್ ಕಾಜೂರು, ಕೆ.ಎಂ. ಅಬೂಬಕ್ಕರ್, ಪ್ರಮುಖರಾದ ಅಶ್ಫಾಕ್ ಕಾಜೂರು, ಶರೀಫ್ ಕಾಜೂರ್, ಆಸಿಫ್ ಜೆ.ಹೆಚ್, ಇರ್ಷಾದ್ ಕಾಜೂರ್, ಬಿ.ಕೆ. ಹಿದಾಯತ್ ಕೃಷ್ಣಾಪುರ, ಉಮರ್‌ಕುಂಞಿ ನಾಡ್ಜೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News