ಬಂಟ್ವಾಳ : ಯುವಕನಿಗೆ ಚೂರಿ ಇರಿತ; ಆರೋಪಿ ಚರಣ್ ವಿರುದ್ಧ ಪ್ರಕರಣ ದಾಖಲು

Update: 2024-04-26 14:11 GMT

ಬಂಟ್ವಾಳ : ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಪರಿಚಿತ ಯುವಕನೋರ್ವ ಚೂರಿಯಿಂದ ಇರಿದ ಘಟನೆ ಫರಂಗಿಪೇಟೆ ಸಮೀಪದ ಕುಮ್ಮೇಲು ಎಂಬಲ್ಲಿ ಶುಕ್ರವಾರ ನಡೆದಿದೆ.

ಆರೋಪಿ ಚರಣ್‌ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಇಲ್ಲಿನ ಸ್ಥಳೀಯ ನಿವಾಸಿ ಪವನ್ ಎಂಬಾತನಿಗೆ ಆತನ ಪರಿಚಿತ ವ್ಯಕ್ತಿಯಾದ ಚರಣ್ ಎಂಬಾತ ಚೂರಿಯಿಂದ ಎದೆಯ ಭಾಗಕ್ಕೆ ಇರಿದ್ದಾನೆ. ತಕ್ಷಣ ಪವನ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News