ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಯುಟಿ ಖಾದರ್ ಭೇಟಿ
Update: 2025-06-27 19:04 IST
ಮಂಗಳೂರು, ಜೂ.27: ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಫರೀದ್ ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ. ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸ ಲಾಗಿದೆ ಎಂದರಲ್ಲದೆ, ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.