×
Ad

ಬಂಟ್ವಾಳ: ಪಿ.ಎಸ್‌.ಐ ಖೀರಪ್ಪ ಆತ್ಮಹತ್ಯೆ

Update: 2025-07-20 21:06 IST

ಕೀರಪ್ಪ

ಬಂಟ್ವಾಳ : ಬಂಟ್ವಾಳ ನಗರ ಠಾಣೆಯ ಪಿ.ಎಸ್‌.ಐ (ಕ್ರೈಮ್ ವಿಭಾಗ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ರವಿವಾರ ಸಂಜೆ ಬೆಳಕಿಗೆ ಬಂದಿದೆ.

ಮೃತ ಪೊಲೀಸ್ ಅಧಿಕಾರಿಯನ್ನು ಉತ್ತರ ಕನ್ನಡ ಮೂಲದ ಖೀರಪ್ಪ (54) ಎಂದು ಗುರುತಿಸಲಾಗಿದೆ.

ಬಂಟ್ವಾಳ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು ಅದೇ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಶಿರಸಿ ಠಾಣೆಯಿಂದ ಕಳೆದ 5 ತಿಂಗಳ ಹಿಂದೆ ಬಂಟ್ವಾಳ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದರು. ಇವರ ಕುಟುಂಬ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಸ್ತವ್ಯ ಇದ್ದು, ಇವರೊಬ್ಬರೇ ಬಂಟ್ವಾಳ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಅವರು ರವಿವಾರ ಬೆಳಿಗ್ಗೆಯಿಂದ ಕರ್ತವ್ಯಕ್ಕೆ ಬಂದಿರಲಿಲ್ಲ. ಮೊಬೈಲ್ ಕರೆ ಮಾಡಿದರೂ ಸ್ವೀಕರಿಸದೆ ಇದ್ದ ಹಿನ್ನಲೆಯಲ್ಲಿ ಸಂಶಯಗೊಂಡ ಠಾಣಾ ಪೊಲೀಸರು ಸಂಜೆ ವೇಳೆ ಅವರು ವಾಸವಾಗಿರುವ ಬಾಡಿಗೆ ಮನೆಗೆ ಹೋಗಿ ಕರೆದರೂ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದಾಗ ಕಿಟಕಿಯಲ್ಲಿ ನೋಡಿದಾಗ ಕೋಣೆ ಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.

ಕೃತ್ಯಕ್ಕೆ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News