×
Ad

ಪುರುಷರಕಟ್ಟೆ: ಕಾರು- ಆಕ್ಟಿವಾ ಢಿಕ್ಕಿ; ಸವಾರ ಮೃತ್ಯು

Update: 2024-09-22 09:27 IST

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಮೃತಪಟ್ಟಿರುವ ಘಟನೆ ಪುರುಷರಕಟ್ಟೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಗಾಯಾಳುವನ್ನು ಪುರುಷರಕಟ್ಟೆ ಇಂದಿರಾ ನಗರ ನಿವಾಸಿ ಹೋಳಿಗೆ ವ್ಯಾಪಾರಿ ಗಣೇಶ್  ಎಂದು ಗುರುತಿಸಲಾಗಿದೆ.  ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಆಕ್ಟಿವಾ ಸವಾರ ಗಾಡಿ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟು ಗಂಭೀರ ಗಾಯಗಳಾಗಿತ್ತು ಎಂದು ತಿಳಿದು ಬಂದಿದೆ.

ಗಂಭೀರ ಗಾಯಗೊಂಡಿದ್ದ ಗಣೇಶ್  ಅವರನ್ನು  ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News