×
Ad

ಪುತ್ತೂರು: ಯುವ ವಿಜ್ಞಾನಿ ಆತ್ಮಹತ್ಯೆ

Update: 2023-12-14 15:06 IST

ಪುತ್ತೂರು: ಯುವ ವಿಜ್ಞಾನಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಗುರುವಾರ ನಡೆದಿದೆ.

ಮೃತ ಯುವಕನನ್ನು ಕಲ್ಲರ್ಪೆ ನಿವಾಸಿ ಭರತ್ (24) ಎಂದು ಗುರುತಿಸಲಾಗಿದೆ.

ಭರತ್ ಅವರು ಹೈದರಾಬಾದ್ ನ ಡಿಆರ್ ಡಿಒ ಎಂಬ ಸಂಸ್ಥೆಯಲ್ಲಿ ವಿಜ್ಞಾನಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಎರಡು ತಿಂಗಳ ಹಿಂದೆಯಷ್ಟೇ ಅವರು ಉದ್ಯೋಗಕ್ಕೆ ಸೇರಿಕೊಂಡಿದ್ದ ಭರತ್, ಕಳೆದ ಒಂದು ವಾರದ ಹಿಂದೆ ಊರಿಗೆ ಆಗಮಿಸಿದ್ದರು. ಸಂಸ್ಥೆಗೆ ರಾಜೀನಾಮೆ ಪತ್ರ ನೀಡಿದ್ದರೂ ರಾಜೀನಾಮೆ ಸ್ವೀಕಾರ ಮಾಡಿರಲಿಲ್ಲ ಎನ್ನಲಾಗಿದೆ.

ಬುಧವಾರ ರಾತ್ರಿ ಡಿಆರ್ ಡಿಒ ಕಛೇರಿಯಿಂದ ಫೋನ್ ಬಂದಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದು, ಆ ಬಳಿಕ ಮಲಗಿದ್ದ ಭರತ್ ಅವರು ತಡರಾತ್ರಿ ಈ ಕೃತ್ಯ ಎಸಗಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News