ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾ ಸಾಂತ್ವನ ಕೇಂದ್ರ ಉದ್ಘಾಟನೆ
ಮಂಗಳೂರು : ಕರ್ನಾಟಕ ರಾಜ್ಯ ಸುನ್ನಿ ಯುವ ಜನ ಸಂಘದ ದ.ಕ ವೆಸ್ಟ್ ಜಿಲ್ಲಾ ಸಮಿತಿಯ ಸಾಂತ್ವನ ಕೇಂದ್ರದ ಉದ್ಘಾಟನೆಯು ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯರ ಅಧ್ಯಕ್ಷತೆಯಲ್ಲಿ ಅಡ್ಯಾರ್ನಲ್ಲಿ ಸೋಮವಾರ ನಡೆಯಿತು.
ಎಸ್ವೈಎಸ್ ರಾಜ್ಯಾಧ್ಯಕ್ಷ ಬಶೀರ್ ಸಅದಿ ಬೆಂಗಳೂರು ಸಾಂತ್ವನ ಕೇಂದ್ರವನ್ನು ಉದ್ಘಾಟಿಸಿದರು. ಜಿಲ್ಲಾ ಸಾಂತ್ವನ ಇಸಾಬ ಮುಖ್ಯಸ್ಥ ಹಾಫಿಳ್ ಯಾಕೂಬ್ ಸಅದಿ ನಾವೂರು ದಿಕ್ಸೂಚಿ ಭಾಷಣ ಮಾಡಿದರು.
ಎಸ್ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ, ಕೋಶಾಧಿಕಾರಿ ಮನ್ಸೂರ್ ಅಲಿ ಕೋಟಗದ್ದೆ, ರಾಜ್ಯ ಉಪಾಧ್ಯಕ್ಷ ಖಲೀಲ್ ಮಾಲಿಕಿ ಬೋಳಂತೂರು ಮಾತನಾಡಿದರು.
ಜಿಲ್ಲಾ ಕೋಶಾಧಿಕಾರಿ ರಝಾಕ್ ಭಾರತ್, ಉಪಾಧ್ಯಕ್ಷರಾದ ಬದ್ರುದ್ದೀನ್ ಅಝ್ಹರಿ ಕೈಕಂಬ, ನವಾಝ್ ಸಖಾಫಿ ಅಡ್ಯಾರ್ ಪದವು, ಜಿಲ್ಲಾ ಕಾರ್ಯದರ್ಶಿ ಮುತ್ತಲಿಬ್ ವೇಣೂರು, ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್, ಜಿಲ್ಲಾ ನಾಯಕರಾದ ಇಬ್ರಾಹಿಂ ಸಖಾಫಿ ಸೆರ್ಕಳ, ಹಕೀಂ ಪೂಮಣ್ಣು, ಉಸ್ಮಾನ್ ಝುಹ್ರಿ ಕಿನ್ಯ, ಶರೀಫ್ ಮುಡಿಪು, ಜಬ್ಬಾರ್ ಕಣ್ಣೂರು, ಉಮರ್ ಮದನಿ ಬೋಳಿಯಾರ್, ಖಾಸಿಂ ಲತೀಫ್ ಮಂಜನಾಡಿ, ರೆನ್ ನಾಯಕರಾದ ಹಮೀದ್ ನಾಟೆಕಲ್, ಇಕ್ಬಾಲ್ ಹಾಜಿ ಮಧ್ಯನಡ್ಕ, ಮುಬೀನ್ ಮಲಾರ್, ಯಾಕೂಬ್ ಅಡ್ಯಾರ್ ಪದವು, ಜಿಲ್ಲಾ ನಾಯಕರಾದ ಬಶೀರ್ ಸಖಾಫಿ ಉಳ್ಳಾಲ, ಇಸ್ಹಾಕ್ ಉಳ್ಳಾಲ ಉಪಸ್ಥಿತರಿದ್ದರು.
ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಇಸಾಬ ಸಾಂತ್ವನ ಕಾರ್ಯದರ್ಶಿ ಫಾರೂಕ್ ಶೇಡಿಗುರಿ ವಂದಿಸಿದರು.