×
Ad

ಉಳ್ಳಾಲ: ನೇತ್ರಾವತಿ ನದಿ ತಟದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Update: 2023-07-30 11:39 IST
ಸಾಂದರ್ಭಿಕ ಚಿತ್ರ

ಉಳ್ಳಾಲ: ನೇತ್ರಾವತಿ ನದಿ ತಟದಲ್ಲಿ ವ್ಯಕ್ತಿಯೋರ್ವರ ಮೃತದೇಹ ಶನಿವಾರ ಸಂಜೆ ವೇಳೆ ಪತ್ತೆಯಾಗಿದೆ.

ಮೃತರನ್ನು ಹಾಸನ ಜಿಲ್ಲೆಯ ಬೇಳೂರು ನಿವಾಸಿ ಮುಹಮ್ಮದ್ ಝಾಕಿರ್(50) ಎಂದು ಗುರುತಿಸಲಾಗಿದೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರೆನ್ನಲಾದ ಇವುರು, ಚಿಕಿತ್ಸೆಗಾಗಿ ಮಂಗಳೂರಿಗೆ ಬರುತ್ತಿದ್ದರು. ಶುಕ್ರವಾರ ಚಿಕಿತ್ಸೆ ನಿಮಿತ್ತ ಮಂಗಳೂರಿಗೆ ಬಂದವರು ಜೀವನದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಗೈದಿರಬೇಕು ಎಂದು ಪೊಲೀಸ್ ಮೂಲಗಳು ತಿಳಿಸಿವೆ

ಈ ಮಾಹಿತಿ ತಿಳಿದು ಕುಟುಂಬಸ್ಥರು ಮಂಗಳೂರಿಗೆ ಬಂದಿದ್ದು, ಅವರನ್ನು ವಿಚಾರಿಸಿದ ಬಳಿಕ ಪೊಲೀಸರು ಮೃತದೇಹ ಬಿಟ್ಟು ಕೊಡಲಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News