ದಾವಣಗೆರೆ | ಸಿಡಿಲು ಬಡಿದು 25 ಮೇಕೆಗಳು ಸಾವು

Update: 2024-04-18 15:04 GMT

ದಾವಣಗೆರೆ : ಸಿಡಿಲು ಬಡಿದು 25 ಮೇಕೆಗಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಆನಗೋಡು ಸಮೀಪದ ಈಚಘಟ್ಟ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

ದಾವಣಗೆರೆ ತಾಲ್ಲೂಕಿನ ಸುತ್ತಮುತ್ತ ಗುರುವಾರ ಸಂಜೆ ಭಾರೀ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಿತು. ಈಚಘಟ್ಟ ಗ್ರಾಮದ ರೈತ ಪಾಪ್ಯಾನಾಯ್ಕ ಮತ್ತು ರೇವತಿಬಾಯಿ ಅವರು ತಮ್ಮ ಮೇಕೆಗಳನ್ನು ಮೇಯಿಸಲು ಜಮೀನಿಗೆ ತೆರಳಿದ್ದರು. ಮಳೆ ಆರಂಭವಾದಾಗ ಮೇಕೆಗಳು ಮರದ ಕೆಳಗೆ ಬಂದು ನಿಂತಿವೆ. ಈ ವೇಳೆ ಸಿಡಿಲು ಬಡಿದು 25 ಮೇಕೆಗಳು ಮೃತಪಟ್ಟಿವೆ ಎನ್ನಲಾಗಿದೆ.

ಅಂದಾಜು 5 ಲಕ್ಷ ರೂ. ನಷ್ಟ ಸಂಭವಿಸಿದ್ದು, ಪಾಪ್ಯಾನಾಯ್ಕ ಅವರು ಉಳಿದ ಮೇಕೆಗಳನ್ನು ಕರೆದುಕೊಂಡು ಬರಲು ಸಿಡಿಲು ಬಡಿದ ಸ್ಥಳದಿಂದ ದೂರ ಹೋಗಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಕಂದಾಯ ಅಧಿಕಾರಿಗಳು, ಪೊಲೀಸರು ಪರಿಶೀಲನೆ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News