ರಂಗನಾಥ ಕೆದ್ಲಾಲಾಯ
Update: 2025-11-02 19:56 IST
ಉಡುಪಿ, ನ.2: ಕಿದಿಯೂರಿನ ನಿವೃತ್ತ ಶಿಕ್ಷಕ ಲಕ್ಷ್ಮೀನಾರಾಯಣ ಕೆದ್ಲಾಯರ ಪುತ್ರ, ಮಾಜಿ ಸೈನಿಕ ರಂಗನಾಥ ಕೆದ್ಲಾಲಾಯ(63) ಶುಕ್ರವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಇವರು 17 ವರ್ಷ ಸೈನ್ಯದಲ್ಲಿ ಸೇವೆ ಸಲ್ಲಿಸಿದ ಬಳಿಕ 20 ವರ್ಷ ಉಡುಪಿ ಕೋರ್ಟಿನಲ್ಲಿ ಉದ್ಯೋಗಿಯಾಗಿ ಕಾರ್ಯನಿರ್ವಹಿಸಿದ್ದರು. ಇವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.