ಕೆಂಗಲ್ ವಿಜಯಲಕ್ಷ್ಮಿ ತಿಮ್ಮಯ್ಯ ನಿಧನ
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯ ಅವರ ಹಿರಿಯ ಮಗಳು ವಿಜಯಲಕ್ಷ್ಮಿ ತಿಮ್ಮಯ್ಯ (88) ಅವರು ಶನಿವಾರ ಬೆಳಗಿನ ಜಾವ ನಿಧನರಾದರು.
ಅವರಿಗೆ, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ರಣಜಿ ಕ್ರಿಕೆಟ್ ಆಟಗಾರ ಕೆಂಗಲ್ ಶ್ರೀಪಾದ ರೇಣು ಸೇರಿದಂತೆ ಮೂವರು ಪುತ್ರರು ಇದ್ದಾರೆ.
ಇಂದು ಸಂಜೆ 5ಕ್ಕೆ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.