ಮುರಾರಿ ರಾವ್

Update: 2024-03-17 14:49 GMT

ಉಡುಪಿ: ಕೆನರಾ ಬ್ಯಾಂಕಿನಲ್ಲಿ ಸೀನಿಯರ್ ಮೆನೇಜರ್ ಆಗಿ ನಿವೃತ್ತರಾದ ಎ.ಮುರಾರಿ ರಾವ್(85) ಇಂದು ಅಲ್ಪಕಾಲದ ಅಸೌಖ್ಯದಿಂದ ಮುಂಬೈಯಲ್ಲಿರುವ ಪುತ್ರಿಯ ಮನೆಯಲ್ಲಿ ನಿಧನರಾದರು.

ಕಲಾಪ್ರೇಮಿ ಆಗಿರುವ ಇವರು, ಬಡ ಮಕ್ಕಳ ಶಿಕ್ಷಣಕ್ಕೆ ನಿರಂತರ ಆರ್ಥಿಕ ನೆರವು ನೀಡುತ್ತಿದ್ಧರು. ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿ ಕಳೆದ ಮೂರು ದಶಕಗಳಿಂದ ಪತ್ನಿ ಚಂದ್ರಕಲಾ ರಾವ್ ರೊಂದಿಗೆ ಉಡುಪಿಯಲ್ಲಿ ನೆಲೆಸಿದ್ದರು.

ಇವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ