×
Ad

ಪ್ರೊ.ನಾರಾಯಣ ಆಚಾರ್ಯ

Update: 2025-12-21 19:02 IST

ಉಡುಪಿ, ಡಿ.21: ಅಂಬಲಪಾಡಿ ನಿವಾಸಿ, ನಿವೃತ್ತ ಪ್ರಾಚಾರ್ಯ ಪ್ರೊ.ಎ.ನಾರಾಯಣ ಆಚಾರ್ಯ(87) ಅಲ್ಪಕಾಲದ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.

ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಸಂಖ್ಯಾಶಾಸ್ತ್ರ ಪ್ರಾಧ್ಯಾಪಕ, ವಿಭಾಗ ಮುಖ್ಯಸ್ಥರಾಗಿ ಮತ್ತು ಸುದೀರ್ಘ ಅವಧಿಗೆ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿದ್ದ ಇವರು, ನಿವೃತ್ತಿಯ ಬಳಿಕವೂ ಉಡುಪಿಯ ಉಪೇಂದ್ರ ಪೈ ಕಾಲೇಜಿನ ಪ್ರಾಚಾರ್ಯರಾಗಿಯೂ ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಆದಿಉಡುಪಿ ಪ್ರೌಢಶಾಲೆಯ ಆಡಳಿತ ಮಂಡಳಿ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಭಂಡಾರ್‌ಕಾರ್ಸ್ ಕಾಲೇಜು ಮತ್ತು ಉಪೇಂದ್ರ ಪೈ ಕಾಲೇಜುಗಳ ಆಡಳಿತ ಮಂಡಳಿ, ವಿದ್ಯಾರ್ಥಿ ವೃಂದ ಮತ್ತು ಹಳೆ ವಿದ್ಯಾರ್ಥಿ ಸಂಘಗಳು, ಅಂಬಲಪಾಡಿ ಬ್ರಾಹ್ಮಣ ಸಂಘ, ಆದಿ ಉಡುಪಿ ಪ್ರೌಢಶಾಲೆಯ ಆಡಳಿತ ಮಂಡಳಿಗಳು ಸಂತಾಪ ಸೂಚಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News