×
Ad

ನಿವೃತ್ತ ಮುಖ್ಯ ಶಿಕ್ಷಕ ಗುರುರಾಜ ರಾವ್

Update: 2025-12-04 18:29 IST

ಉಳ್ಳಾಲ, ಡಿ.4: ಸೋಮೇಶ್ವರ ಆನಂದಾಶ್ರಮ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಪಿ. ಗುರುರಾಜ ರಾವ್ (92) ಬುಧವಾರ ನಿಧನರಾದರು.

ಒಬ್ಬ ಪುತ್ರ ಮತ್ತು ಅಪಾರ ಬಂಧುಮಿತ್ರರನ್ನು ಮೃತರು ಅಗಲಿದ್ದಾರೆ.

1956ರಲ್ಲಿ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ಆರಂಭಿಸಿದ ಅವರು 35 ವರ್ಷಗಳ ಕಾಲ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು.

ಆನಂದಾಶ್ರಮ ಶಾಲಾಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಗುರುರಾಜ ರಾವ್ರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News