ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ ನಿಧನ
Update: 2025-12-14 22:45 IST
ಮಂಗಳೂರು: ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಇರಾ ನಿವಾಸಿ, ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ (68 ) ಅಲ್ಪ ಕಾಲದ ಅಸೌಖ್ಯದಿಂದ ಡಿ.14ರಂದು ನಿಧನ ಹೊಂದಿದರು.
ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿರುವ ರೈ ಅಗಲಿದ್ದಾರೆ. ಶ್ರೀಧರ ರೈ ಅವರು ಪುಂಡು ವೇಷ, ರಾಜ್ ವೇಷ, ಬಣ್ಣದ ವೇಷಧಾರಿಯಾಗಿ ಕೊಲ್ಲೂರು ಮೇಳ, ಸುಂಕದಕಟ್ಟೆ ಮೇಳ, ಭಗವತೀ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು.