×
Ad

ಹುಬ್ಬಳ್ಳಿ| ಭೀಕರ ರಸ್ತೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

Update: 2024-01-06 12:18 IST

ಹುಬ್ಬಳ್ಳಿ: ಎರಡು ಕಾರು ಮತ್ತು ಒಂದು ಲಾರಿ ನಡುವೆ ಸರಣಿ  ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ಹೊರವಲಯದ ಪೂನಾ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಮೃತರನ್ನು ಮಣಿಕಂಠ (26), ಪವನ್(23), ಚಂದನ್ (31) ಹಾಗೂ ಬೆಂಗಳೂರಿನ ಪ್ರಭು(34) ಎಂದು ಗುರುತಿಸಲಾಗಿದೆ. ‌

ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು, ಬೆಂಗಳೂರಿನಿಂದ ಶಿರಡಿಗೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಧಾರವಾಡ ಎಸ್ಪಿ ಡಾ ಗೋಪಾಲ ಬ್ಯಾಕೋಡ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮವನ್ನು ಕೈಗೊಂಡಿ ದ್ದಾರೆ. ಈ ಕುರಿತು ಕುಂದಗೋಳ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News