×
Ad

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಹೆಸರೇ ಮುಂಚೂಣಿಯಲ್ಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Update: 2024-03-17 16:32 IST

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ಅವರ ಹೆಸರು ಇದೆ. ಅವರೂ ಅಲ್ಲಿ ಸ್ಪರ್ಧೆ ಮಾಡುವುದಾಗಿ ಒಪ್ಪಿದ್ದಾರೆ. ತಮಗೆ ಗೊತ್ತಿರುವ ಮಾಹಿತಿ ಪ್ರಕಾರ ಬಿಜೆಪಿ ಪಟ್ಟಿಯಲ್ಲಿ ಸದ್ಯ ಜಗದೀಶ್ ಶೆಟ್ಟರ್ ಅವರ ಹೆಸರೇ ಮುಂಚೂಣಿ ಇದೆ. ಈ ಬಗ್ಗೆ ರಾಷ್ಟ್ರೀಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಜೆಡಿಎಸ್ 3 ಕ್ಷೇತ್ರಗಳನ್ನು ಕೇಳುವುದು ಸಹಜ: ರಾಜ್ಯದಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ 3 ಕ್ಷೇತ್ರಗಳನ್ನು ಕೇಳುವುದು ಸಹಜವೇ ಇದೆ. ಈ ಬಗ್ಗೆ ಇನ್ನೂ ಯಾವುದು ಫೈನಲ್ ಆಗಿಲ್ಲ. ಸದ್ಯದಲ್ಲೇ ಪಕ್ಷದ ವರಿಷ್ಠರು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News