×
Ad

ಯಡಿಯೂರಪ್ಪ ಸಿಎಂ ಆಗಿದ್ದಾಗ ಹಲವು ಕಡತಗಳಿಗೆ ವಿಜಯೇಂದ್ರ ತಂದೆಯ ನಕಲಿ ಸಹಿ ಮಾಡಿದ್ದಾರೆ: ಯತ್ನಾಳ್ ಆರೋಪ

Update: 2025-01-20 12:41 IST

ಹುಬ್ಬಳ್ಳಿ : ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಲವು ಕಡತಗಳಿಗೆ ಬಿ.ವೈ.ವಿಜಯೇಂದ್ರ ಅವರೇ ಯಡಿಯೂರಪ್ಪ ಅವರ ನಕಲಿ ಸಹಿ ಮಾಡಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರ ತನಿಖೆ ಮಾಡಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಒತ್ತಾಯಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಕಲಿ ಸಹಿ ಮಾಡಿರುವ ವ್ಯಕ್ತಿಯನ್ನು ಪಕ್ಷದ ಅಧ್ಯಕ್ಷ ಅಥವಾ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬಹುದೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ ಸಿಎಂ ಆಗಿದ್ದಾಗ ಎಷ್ಟು ನಕಲಿ ಸಿಹಿಗಳಾಗಿವೆ ಎಂಬುದರ ಬಗ್ಗೆ ತನಿಖೆ ಆಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ತಾಕತ್ತಿದ್ದರೆ ಈ ಬಗ್ಗೆ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.

ನಮ್ಮ ಬಣದಿಂದಲೂ ಅಭ್ಯರ್ಥಿ ಕಣಕ್ಕೆ:

ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರರ ಬದಲಾವಣೆ ಆಗಲೇಬೇಕು. ರಾಜ್ಯ ಅಧ್ಯಕ್ಷೀಯ ಚುನಾವಣೆಗೆ ನಮ್ಮ ಬಣದಿಂದಲೂ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಈ ಬಗ್ಗೆ ಶಾಸಕ ರಮೇಶ ಜಾರಕಿಹೊಳಿ ಅವರ ಜೊತೆ ಚರ್ಚಿಸಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದು ಯತ್ನಾಳ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News