×
Ad

ಹಾವೇರಿ | ಸಿಡಿಲು ಬಡಿದು ರೈತ ಮೃತ್ಯು

Update: 2025-05-14 00:02 IST

ಸಾಂದರ್ಭಿಕ ಚಿತ್ರ

ಹಾವೇರಿ : ಜಮೀನಿಗೆ ಹೋಗಿದ್ದ ರೈತರೊಬ್ಬರು ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕುಡಪಲಿ ಗ್ರಾಮದಲ್ಲಿ ನಡೆದಿದೆ.

ಸುನೀಲ್ ಕಾಳೇರ್ (29) ಮೃತ ರೈತ ಎಂದು ತಿಳಿದು ಬಂದಿದೆ. ನಿನ್ನೆ ಜಮೀನಿಗೆ ಕೆಲಸ ಮಾಡಲು ಹೋಗಿದ್ದ ವೇಳೆ ಸಿಡಿಲು ಬಡಿದು ದುರ್ಘಟನೆ ಸಂಭವಿಸಿದ್ದು, ಇಂದು ಜಮೀನಿಗೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ರಟ್ಟಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News