ಚುನಾವಣೆಗೆ ಸ್ಪರ್ಧಿಸುತ್ತಿರುವ ದಿಂಗಾಲೇಶ್ವರ ಸ್ವಾಮೀಜಿಗೆ ಬೆಂಬಲ ಸೂಚಿಸಿದ ವಚನಾನಂದ ಶ್ರೀ

Update: 2024-04-09 13:11 GMT

Photo : ದಿಂಗಾಲೇಶ್ವರ ಸ್ವಾಮೀಜಿ/ ವಚನಾನಂದ ಶ್ರೀ

ದಾವಣಗೆರೆ : ದಿಂಗಾಲೇಶ್ವರ ಸ್ವಾಮೀಜಿ ರಾಜಕೀಯ ಪ್ರವೇಶವನ್ನು ತಾವು ಸ್ವಾಗತಿಸುವುದಾಗಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀ ಪ್ರಕಟಿಸಿದ್ದಾರೆ.

ಮಂಗಳವಾರ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಭಾರತದಂತೆ ಕರ್ನಾಟಕದಲ್ಲಿಯೂ ಮಠಾಧೀಶರು ರಾಜಕಾರಣಕ್ಕೆ ಬರಬೇಕು. ರಾಜಕಾರಣದಲ್ಲಿ ಅಶುದ್ಧಿಯನ್ನ ಶುದ್ಧಿ ಮಾಡುವುದಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಬಹಳ ಯೋಗ್ಯರು ಅಂತ ನನಗೆ ಅನಿಸುತ್ತೆ ಎಂದು ನುಡಿದರು.

ಕೇಂದ್ರ ಸಚಿವ ‌ಪ್ರಹ್ಲಾದ ಜೋಶಿ ಅವರು ಆ ಭಾಗದ ಲಿಂಗಾಯತ ನಾಯಕರನ್ನ ತುಳಿಯುವಂತ ಕೆಲಸ ಮಾಡಿದ್ದಾರೆ ಎಂಬ ವಿಚಾರವೂ ನಮ್ಮ ಗಮನಕ್ಕೆ ಬಂದಿದೆ. ಈ ವಿಚಾರವಾಗಿ ನಾವು ಶೀಘ್ರದಲ್ಲಿಯೇ ಸಭೆ ನಡೆಸಿ ನಮ್ಮ ತೀರ್ಮಾನ ತಿಳಿಸುತ್ತೇವೆ. ದಿಂಗಾಲೇಶ್ವರ ಸ್ವಾಮೀಜಿ ಬಹಳ ಕಾಲದಿಂದಲೂ ಪರಿಚಯಸ್ಥರು. ಅದು ಅವರ ವೈಯಕ್ತಿಕ ತೀರ್ಮಾನವಲ್ಲ, ಭಕ್ತರ ಅಭಿಪ್ರಾಯ ಕೇಳಿಕೊಂಡು ಚುನಾವಣೆಗೆ ಮುಂದಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News