ಪ್ರಜಾಪ್ರಭುತ್ವದ ಉಳಿವಿಗಾಗಿ, ಸಂವಿಧಾನದ ರಕ್ಷಣೆಗಾಗಿ ಕಾಂಗ್ರೆಸ್‌ ಗೆ ಮತ ನೀಡಿ: ಅಬ್ದುರ್ರಹ್ಮಾನ್ ಕೋಡಿಜಾಲ್

Update: 2024-04-25 09:06 GMT

ಮಂಗಳೂರು: ದೇಶ ಪ್ರಜಾಪ್ರಭುತ್ವದ ಉಳಿವಿಗಾಗಿ, ಸಂವಿಧಾನದ ರಕ್ಷಣೆಗಾಗಿ ಮತ್ತು ದೇಶದ ಸಮಗ್ರ ಅಭಿವೃದ್ಧಿಗಾಗಿ ಪ್ರತಿಯೊಬ್ಬ ಪ್ರಜ್ಞಾವಂತ ಮತದಾರ ತಮ್ಮ ಅಮೂಲ್ಯವಾದ ಮತವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀಡಿ ಗೆಲ್ಲಿಸಬೇಕೆಂದು ಕರ್ನಾಟಕ ರಾಜ್ಯ ವಕ್ಫ್ ಪರಿಷತ್ ಸದಸ್ಯರಾದ ಅಬ್ದುರ್ರಹ್ಮಾನ್ ಕೋಡಿಜಾಲ್ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ. ರಾಜ್ಯ ಸರಕಾರ ಪಂಚ ಗ್ಯಾರಂಟಿಗಳನ್ನು ನೀಡುವ ಮೂಲಕ ಪ್ರತಿಯೊಬ್ಬ ಬಡವನಿಗೆ, ಮಹಿಳೆಗೆ, ಯುವಕರಿಗೆ ಬಹಳಷ್ಟು ಸಹಾಯ ಮಾಡಿರುತ್ತದೆ. ಕೇಂದ್ರದಲ್ಲಿ ಕೂಡ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರ ಬಂದರೆ ದೇಶದ ಜನತೆಗೆ ಪಂಚ ಗ್ಯಾರಂಟಿಗಳನ್ನು ನೀಡುವುದಾಗಿ ಘೋಷಣೆ ಮಾಡಿರುತ್ತದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದ ಜನತೆಗೆ ಯಾವುದೇ ಸಹಾಯ ಮಾಡದೆ ಬರೀ ಸುಳ್ಳು ಭರವಸೆಗಳನ್ನು ಮಾತ್ರ ನೀಡಿರುತ್ತದೆ. ಕೇವಲ ಶ್ರೀಮಂತರಿಗೆ ಮತ್ತು ಬಂಡವಾಳ ಶಾಹಿಗಳಿಗೆ ಮಾತ್ರ ಸಹಾಯ ಮಾಡಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಭಾರಿಗೆ ಪ್ರಧಾನಿಯೊಬ್ಬ ದ್ವೇಷ ಭಾಷಣ ಮಾಡುವ ಮೂಲಕ ಜನಾಂಗೀಯ ದ್ವೇಷವನ್ನು ಹರಡಲು ಪ್ರಧಾನಿ ನರೇಂದ್ರ ಮೋದಿ ಕಾರಣರಾಗಿರುತ್ತಾರೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಚುನಾವಣಾ ಬಾಂಡ್ ಮತ್ತು ಪ್ರಧಾನ ಮಂತ್ರಿ ಪರಿಹಾರ ಫಂಡ್ ಗಳ ಮೂಲಕ ಬಹಳ ದೊಡ್ಡ ಹಗರಣವನ್ನು ಕೂಡ ಬಿಜೆಪಿ ಸರಕಾರ ಮಾಡಿರುತ್ತದೆ ಎಂದು ಅವರು ಆರೋಪಿಸಿದ್ದಾರೆ.

ದಕ್ಷಿಣ ಕನ್ನಡದಿಂದ ಕಾಂಗ್ರೆಸ್ ಅಭ್ಯರ್ಥಿಯಾದ ಪದ್ಮರಾಜ್ ಆರ್ ಪೂಜಾರಿ ಓರ್ವ ಯುವ ನ್ಯಾಯವಾದಿ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಕೆಲಸ ಮಾಡುವ ಸರ್ವ ಜನಾಂಗದ ಪ್ರೀತಿಗೆ ಪಾತ್ರರಾದ ಅಭ್ಯರ್ಥಿಯಾಗಿರುತ್ತಾರೆ. ದಕ್ಷಿಣ ಕನ್ನಡದ ಪ್ರತಿಯೊಬ್ಬ ಪ್ರಜ್ಞಾವಂತ ಮತದಾರರು ಕೂಡ ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ಮತ ನೀಡುವ ಮೂಲಕ ಪದ್ಮರಾಜ್ ಆರ್ ಪೂಜಾರಿಯನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕೆಂದು ಅವರು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News