×
Ad

77ನೇ ಸ್ವಾತಂತ್ರ್ಯ ದಿನಾಚರಣೆ: ಮನಮೋಹಕ ಕವಾಯತು

ರಾಜಧಾನಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಬಳಿಕ ತೆರೆದ ವಾಹನದಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿದರು. ಮೈದಾನದ ಪಂಥಸಂಚಲನದಲ್ಲಿ ಕೆ.ಎಸ್.ಆರ್.ಪಿ, ಸಿ.ಆರ್.ಪಿ.ಎಫ್, ಬಿ.ಎಸ್.ಎಫ್, ಸಿ.ಎ.ಆರ್, ಕೆ.ಎಸ್.ಐ.ಎಸ್,ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾಡ್ರ್ಸ್, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ವಿವಿಧ ಶಾಲೆಗಳ ಮಕ್ಕಳು ಸೇರಿ ಒಟ್ಟು 38 ತುಕಡಿಗಳಿಂದ ಮನಮೋಹಕ ಕವಾಯತು ಜರುಗಿತು.

Update: 2023-08-16 00:11 IST


Delete Edit



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News